Mankuthimmana Kagga

A New Desire Every Moment

204-208

204

ದೇವಾಂಶ ಪಶ್ವಂಶಗಳ ಗಂಟು ಮಾನುಷತೆ ।
ಧೀವಿಮರ್ಶೆಯಿನೊಂದ ಸತ್ಕರಿಸಿ ಬಲಿಸಿ ॥
ಭಾವಪರಿಶೋಧನೆಯಿನಿನ್ನೊಂದ ದಂಡಿಪುದೆ ।
ಜೀವಪ್ರಕರ್ಷಗತಿ — ಮಂಕುತಿಮ್ಮ ॥

ದೇವತೆಗಳಿಗಿರುವ ಗುಣಗಳ ಮತ್ತು ಪಶುಗಳಿಗಿರುವ ಗುಣಗಳ ಮಿಶ್ರಣವೇ ಮನುಷ್ಯಗುಣ. ತನ್ನ ಬುದ್ಧಿಶಕ್ತಿಯನ್ನು ಉಪಯೋಗಿಸಿ ಪಶುಗುಣಗಳನ್ನು ಕರಗಿಸುತ್ತಾ ದೈವೀಗುಣಗಳನ್ನು ಹೆಚ್ಚಿಸಿ ಕೊಳ್ಳುವುದೇ ಪ್ರಕರ್ಷ, ಎಂದರೆ ಪ್ರಗತಿ ಎಂದು ಈ ಕಗ್ಗದಲ್ಲಿ ಮಾನ್ಯ ಗುಂಡಪ್ಪನವರು ಪ್ರಸ್ತಾಪಿಸುತ್ತಾರೆ.

Humanness is a mix of god-ness and animal-ness. With intellect and analysis, respect and strengthen one. With emotional cleansing, punish the other. This is the life-path to prosperity.

205

ಕಲ್ಲಾಗಿ ನಿಲ್ಲುವನು, ಬಳ್ಳಿವೊಲು ಬಳುಕುವನು ।
ಮುಳ್ಳಾಗಿ ಚುಚ್ಚುವನು, ಫುಲ್ಲಸುಮವಹನು ॥
ಕಲ್ಲೋಲವಾರಿಧಿವೊಲುರವಣಿಸಿ ಮೊರೆಯುವನು ।
ಕ್ಷುಲ್ಲಮಾನಿಸನಿವನು — ಮಂಕುತಿಮ್ಮ ॥

ಮನುಷ್ಯನ ಹಲವಾರು ಗುಣಗಳನ್ನು ವರ್ಣಿಸುತ್ತಾ, ಮಾನವನು ಕೆಲಬಾರಿ, ಕಲ್ಲಿನಂತೆ ಗಟ್ಟಿಯಾಗಿಯೂ, ಕೆಲಬಾರಿ ಬಳ್ಳಿಯಂತೆ ವಾಲುತ್ತಾ, ಕೆಲಬಾರಿ ಮುಳ್ಳಿನಂತೆ ಪರರನ್ನು ಚುಚ್ಚುತ್ತಾ, ಕೆಲಬಾರಿ ಅರಳಿದ ಕುಸುಮದಂತೆ ಸುಗಂಧವನ್ನು ಬೀರುತ್ತಾ, ಕೆಲಬಾರಿ ಸಮುದ್ರದ ಅಲೆಯಂತೆ ಮೇಲೆದ್ದು ಮತ್ತೆ ಕೆಳಗೆ ಬೀಳುತ್ತಾ ಸ್ಥಿರ ಮನಸ್ಸಿಲ್ಲದ ಕ್ಷುಲ್ಲಕ ಮನಸ್ಸಿನವನು ಇವನು, ಎಂದು ಪ್ರಸ್ತಾಪ ಮಾಡುತ್ತಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.

He stands like a stone, he bends like a creeper, he pricks like a thorn, he blooms like a flower, he splashes and roars like the ocean waves. He is a lowly human.

206

ಸತ್ತವೆನ್ನಾಶೆಗಳು, ಗೆದ್ದೆನಿಂದ್ರಿಯಗಣವ ।
ಚಿತ್ತವಿನ್ನಲುಗದೆಂಬಾ ಜಂಬ ಬೇಡ ॥
ಎತ್ತಣಿಂದಲೊ ಗಾಳಿ ಮೋಹಬೀಜವ ತಂದು ।
ಬಿತ್ತಲಾರದೆ ಮನದಿ — ಮಂಕುತಿಮ್ಮ ॥

“ನನಗೆ ಆಸೆಗಳು ಸತ್ತಿವೆ. ನಾನು ಇಂದ್ರಿಯಗಳನ್ನು ಗೆದ್ದಿದ್ದೇನೆ. ನನ್ನ ಮನಸ್ಸು ಇನ್ನು ಚಂಚಲವಾಗದು ” ಎಂಬ ಜಂಬ ಪಡಬೇಡ. ಯಾವುದಾದರೂ ಒಂದು ಕಾರಣದಿಂದ, ನಿನ್ನ ಮನಸ್ಸಿನಲ್ಲಿ ಮತ್ತೆ ಆಸೆಯ ಬೀಜ ಬಂದು ಮೊಳಕೆಯೊಡೆಯಬಹುದಲ್ಲ ಎಂದು ಒಂದು ವಾಸ್ತವಿಕತೆಯನ್ನು ಬಣ್ಣಿಸುತ್ತಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.

"My desires are dead," "I've conquered the senses," "My mind won't shake anymore" — don't feel such pride. The wind may bring the seed of infatuation from somewhere and sow it in your mind.

207

ಒಣಗಿ ಬೇಸಗೆಯಿಂದ ಮಣ್ಣಾಗಿ ಕಾಣದಿಹ ।
ತೃಣ ಮೊಳೆಯುವುದು ಮರಳಿ ಹನಿಯೆರಡು ಬೀಳೆ ॥
ಅಣಗಿರ್ದು ನರನಾಶೆಯಂತು ಕಷ್ಟದ ದಿನದಿ ।
ಕುಣಿವುದನುಕೂಲ ಬರೆ — ಮಂಕುತಿಮ್ಮ ॥

ಬೇಸಿಗೆಯಲ್ಲಿ ಒಣಗಿ ನಮಗೆ ಬರೀ ಮಣ್ಣಂತೆ ಕಾಣುವ ಹುಲ್ಲು ನಾಲ್ಕು ಹನಿ ಮಳೆ ಬಿದ್ದರೆ ಮತ್ತೆ ಚಿಗುರುವಂತೆ, ಕಷ್ಟದ ದಿನಗಳಲ್ಲಿ ಮನದ ಅಂತರ್ಯದಲ್ಲಿ, ಕಾಣದಂತೆ ಇದ್ದ ಮನುಷ್ಯನ ಆಸೆಗಳೆಲ್ಲ ಅನುಕೂಲವಾದ ಸ್ಥಿತ ಬಂದೊಡನೆಯೇ ಮತ್ತೆ ಚಿಗುರುತ್ತವೆ ಎಂದು ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ ಹೇಳುತ್ತಾರೆ.

Dried and hidden in the soil during summer, grass sprouts again with a few drops of water. Suppressed during hard days, human desires jump out when days are favorable.

208

ಬೆದಕಾಟ ಬದುಕೆಲ್ಲ; ಚಣಚಣವು ಹೊಸ ಹಸಿವು ।
ಅದಕಾಗಿ ಇದಕಾಗಿ ಮತ್ತೊಂದಕಾಗಿ ॥
ಅಧಿಕಾರ ಸಿರಿ ಸೊಗಸು ಕೀರ್ತಿಗಳ ನೆನೆದು ಮನ ।
ಕುದಿಯುತಿಹುದಾವಗಂ — ಮಂಕುತಿಮ್ಮ ॥

ಪ್ರತೀ ಕ್ಷಣವೂ ನಾವುಗಳೆಲ್ಲ ಹೊಸ ಹೊಸ ಯೋಜನೆಗಳು, ಯೋಚನೆಗಳು, ಆಸೆಗಳು, ಆಕಾಂಕ್ಷೆಗಳನ್ನು ಹೊತ್ತು, ಇದನ್ನೋ, ಅದನ್ನೋ ಅಥವಾ ಮತ್ಯಾವುದನ್ನೋ ಪಡೆಯುವುದಕ್ಕೆ ಪರದಾಡುತ್ತಿರುತ್ತೇವೆ. ಈ ಪರದಾಟ, ಅಧಿಕಾರ ಸಂಪತ್ತು, ಅಂದ ಚೆಂದ ಅಥವಾ ಕೀರ್ತಿಗಳಂತಹ ವಿಚಾರಗಳನ್ನು ನೆನೆದು ನಮ್ಮ ಮನಸ್ಸುಗಳು ಕುದಿಯುತ್ತಿರುತ್ತವೆ ಎಂಬ ವಿಷಯವನ್ನು ಮಂಡಿಸಿದ್ದಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.

Life is a struggle — a new desire every moment. For this, for that, and for the other. Thinking of power, wealth, luxury, fame. The mind is boiling, restless.